Saturday, August 1, 2026
Homeಸೂರ್ಯಗಗನI ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ I ಕಾಲೇಜಿಗೆ ಸಮಗ್ರ ಪ್ರಶಸ್ತಿ I

I ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ I ಕಾಲೇಜಿಗೆ ಸಮಗ್ರ ಪ್ರಶಸ್ತಿ I

I ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ I ಕಾಲೇಜಿಗೆ ಸಮಗ್ರ ಪ್ರಶಸ್ತಿ I

ಶಿವಮೊಗ್ಗ: ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 38ನೇ ಅಂತರ ಕಾಲೇಜು ಅಥ್ಲೆಟಿಕ್ ಕ್ರೀಡಾಕೂಟ 2025-26ರಲ್ಲಿ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಪುರುಷರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಮತ್ತು ಕುವೆಂಪು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ಕ್ರೀಡಾಕೂಟದ ಪುರುಷರ ವಿಭಾಗದಲ್ಲಿ ಯುಸಿಪಿಇ ಶಂಕರಘಟ್ಟ ದ್ವಿತೀಯ ಸ್ಥಾನ ಹಾಗೂ ಎಲ್.ಬಿ & ಎಸ್.ಬಿ.ಎಸ್ ಕಾಲೇಜು ಸಾಗರ  ತೃತೀಯ ಸ್ಥಾನ ಪಡೆದುಕೊಂಡಿದೆ.

ಮಹಿಳಾ ವಿಭಾಗದಲ್ಲಿ ಸಾಗರದ ಇಂದಿರಾಗಾಂಧಿ ಮಹಿಳಾ  ಕಾಲೇಜು ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದು, ಡಿವಿಎಸ್ ಕಲಾ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ದ್ವಿತೀಯ ಸ್ಥಾನ ಹಾಗೂ ಕೆ.ಜಿ.ಎಫ್.ಜಿ.ಸಿ ಹೊಸನಗರ ತೃತೀಯ ಸ್ಥಾನ ಪಡೆದುಕೊಂಡಿದೆ. ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಬಸಪ್ಪಗೌಡ ಕ್ರೀಡಾಪಟುಗಳಿಗೆ ಶುಭಕೋರಿದರು. ಕ್ರೀಡಾಕೂಟದಲ್ಲಿ ಕುವೆಂಪು ವಿಶ್ವವಿದ್ಯಾನಿಲಯದ 32ಕ್ಕೂ ಹೆಚ್ಚು ಕಾಲೇಜುಗಳು ಭಾಗವಹಿಸಿದ್ದವು. 220 ಪುರುಷ ಕ್ರೀಡಾಪಟುಗಳು ಹಾಗೂ 150 ಮಹಿಳಾ ಕ್ರೀಡಾಪಟುಗಳು ಪಾಲ್ಗೊಂಡಿದ್ದರು.
ಅತಿಥೇಯ ಕಾಲೇಜಿನ ಧನಂಜಯ ಬಿ ಪುರುಷರ ವಿಭಾಗದಲ್ಲಿ ಹಾಗೂ ಭೂಮಿಕಾ ಕೆ.ಎನ್ ಮಹಿಳಾ ವಿಭಾಗದಲ್ಲಿ ಬೆಸ್ಟ್ ಅಥ್ಲೀಟ್ ಪ್ರಶಸ್ತಿ ಪಡೆದುಕೊಂಡರು.

ವಿಶೇಷ ದಾಖಲೆಯಾಗಿ ಡಿವಿಎಸ್ ಕಾಲೇಜಿನ ಭೂಮಿಕಾ ಕೆ ಎನ್ ಅವರು ಲಾಂಗ್ ಜಂಪ್ ನಲ್ಲಿ 5.31 ಮೀಟರ್ ಮತ್ತು ಟ್ರಿಪಲ್ ಜಂಪ್ ನಲ್ಲಿ 11.20 ಮೀಟರ್ ಜಿಗಿದು ನೂತನ ಕ್ರೀಡಾಕೂಟ ದಾಖಲೆಗಳನ್ನು ನಿರ್ಮಿಸಿದ್ದಾರೆ.
ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ಪಿ.ದಿನೇಶ್ ಅವರು ವಿಜೇತರನ್ನು ಅಭಿನಂದಿಸಿದರು. ದೇಶಿಯ ವಿದ್ಯಾಶಾಲಾ ಸಮಿತಿ ಸಹಕಾರ್ಯದರ್ಶಿ ಡಾ. ಎಂ. ಸತೀಶ್ ಕುಮಾರ್ ಶೆಟ್ಟಿ, ಕುವೆಂಪು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಎನ್.ಡಿ.ವಿರೂಪಾಕ್ಷ, ಸಹಾಯಕ ನಿರ್ದೇಶಕ ಡಾ. ರವಿಂದ್ರ, ಡಿವಿಎಸ್ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ವೆಂಕಟೇಶ್, ಐಕ್ಯೂಎಸಿ ಸಂಚಾಲಕ ಎನ್.ಕುಮಾರಸ್ವಾಮಿ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಸಚಿನ್ ಕೆ, ಹಾಗೂ ವಿವಿಧ ಕಾಲೇಜುಗಳ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I