Sunday, 20 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I
ಸೂರ್ಯಗಗನ

I ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಆಗ್ರಹ I ವಕೀಲರ ಸಂಘದ ಪ್ರತಿಭಟನೆಗೆ ಕರವೇ ಸ್ವಾಭಿಮಾನಿ ಬಣ ಬೆಂಬಲ I ಮುಖ್ಯಮಂತ್ರಿಗಳಿಗೆ ಮನವಿ I

I ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಆಗ್ರಹ I ವಕೀಲರ ಸಂಘದ ಪ್ರತಿಭಟನೆಗೆ ಕರವೇ ಸ್ವಾಭಿಮಾನಿ ಬಣ ಬೆಂಬಲ I ಮುಖ್ಯಮಂತ್ರಿಗಳಿಗೆ ಮನವಿ I ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಮಧ್ಯ ಕರ್ನಾಟಕದ ಭಾಗವಾಗಿದ್ದು, ಇಲ್ಲಿನ ನಾಗರೀಕ ನ್ಯಾಯಕ್ಕಾಗಿ ಶಿವಮೊಗ್ಗದಲ್ಲಿ…

I ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಆಗ್ರಹ I ವಕೀಲರ ಸಂಘದ ಪ್ರತಿಭಟನೆಗೆ ಕರವೇ ಸ್ವಾಭಿಮಾನಿ ಬಣ ಬೆಂಬಲ I ಮುಖ್ಯಮಂತ್ರಿಗಳಿಗೆ ಮನವಿ I

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಮಧ್ಯ ಕರ್ನಾಟಕದ ಭಾಗವಾಗಿದ್ದು, ಇಲ್ಲಿನ ನಾಗರೀಕ ನ್ಯಾಯಕ್ಕಾಗಿ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಆಗ್ರಹಿಸಿ ಶಿವಮೊಗ್ಗ ವಕೀಲರ ಸಂಘದಿಂದ ನಡೆಸುತ್ತಿರುವ ಅನಿರ್ಧಿಷ್ಠವಾಧಿ ಧರಣಿ ಜನತೆಯ ಹಿತದೃಷ್ಠಿಯಿಂದ ನ್ಯಾಯ ಸಮ್ಮತವಾಗಿರುವ ಹೋರಾಟಕ್ಕೆ ಕರವೇ ಸ್ವಾಭಿಮಾನಿ ಬಣ ಬೆಂಬಲಿಸಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಮನವಿ ಮಾಡುತ್ತಿದೆ ಎಂದು ಜಿಲ್ಲಾಧ್ಯಕ್ಷ ಕರವೇ ಕಿರಣ್  ತಿಳಿಸಿದರು

ಅವರು ನ್ಯಾಯಾಲಯದ ಆವರಣದಲ್ಲಿ ಕೈಗೊಂಡಿರುವ ವಕೀಲರ ಸಂಘದ ಮುಷ್ಕರದಲ್ಲಿ ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಬೈಕ್ ಜಾಥದಲ್ಲಿ ಧಾವಿಸಿ ಬಂದು ಪಾಲ್ಗೊಂಡು  ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು,

ಶಿವಮೊಗ್ಗ ಸೇರಿದಂತೆ ವಿಭಾಗೀಯ ಮಟ್ಟದಲ್ಲಿ ಹಾಗೂ ಮಧ್ಯ ಕರ್ನಾಟಕದ ಭಾಗವಾಗಿರುವ ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಗಳ ನಾಗರೀಕರು ಮಂಗಳೂರಿಗೆ ಪಯಣಿಸಿ ಕಾನೂನು ಕೇಸುಗಳನ್ನು ಇತ್ಯರ್ಥ ಪಡಿಸಿ ಕೊಳ್ಳುವುದಕ್ಕೆ ಸುಗಮವಾಗಲು ಸಾಧ್ಯವಾಗುವುದಿಲ್ಲ, ಬದಲಿಗೆ ಯಾವುದೇ ಅಂಕಿ ಅಂಶಗಳ ಕೇಸುಗಳು, ಪ್ರತಿಕೂಲ ವಾತಾವರಣ, ಪ್ರವಾಸದ ಅನುಕೂಲತೆಗಳು, ಆರ್ಥಿಕ ಸ್ಥಿತಿಗತಿಗಳು, ಪ್ರಾಕೃತಿಕ ವಿಕೋಪಗಳು, ಶಿವಮೊಗ್ಗ ಜಿಲ್ಲಾ ವಿಭಾಗವಾದ ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲಾ ಜನತೆಗೆ ತಂದೊಡ್ಡುವ ಬಹುದೊಡ್ಡ ಸಮಸ್ಯೆಗಳನ್ನು ಪರಿಗಣಿಸಿದೆ ಮುಖ್ಯಮಂತ್ರಿಗಳು ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಲು ಅನುಮತಿ ಕೋರಿ ಮುಖ್ಯಮಂತ್ರಿಗಳು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿರುವುದು ಅವೈಜ್ಞಾನಿಕವಾಗಿದೆ ಎಂದು ಕರವೇ ಸ್ವಾಭಿಮಾನಿ ಬಣ ಮುಖ್ಯಮಂತ್ರಿಗಳ ಗಮನಕ್ಕೆ ಈ ಮೂಲಕ ತರುತ್ತಿದ್ದೇವೆ ಎಂದು ವಿವರಿಸಿದರು

ಮಂಗಳೂರು ಪೀಠದ ಸ್ಥಾಪನೆಗೆ ರಾಜ್ಯ ಸರ್ಕಾರದ ಇಚ್ಚಾಶಕ್ತಿ ಇದ್ದರೆ ಇದರಲ್ಲಿ ಜೋಡಿಸಲಾಗಿರುವ ಶಿವಮೊಗ್ಗ ಹಾಗೂ ಮಧ್ಯ ಕರ್ನಾಟಕದ ಜಿಲ್ಲೆಗಳನ್ನು ಕೈ ಬಿಡಬೇಕು, ಹಾಗೂ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮುಂದಾಗಬೇಕೆಂದು ತಿಳಿಸಿರುವುದು, ಮಧ್ಯ ಕರ್ನಾಟಕದ ಜನತೆಗೊಂದು ಸಾಮಾಜಿಕ ನ್ಯಾಯವಾಗಿದೆ ಹೀಗಾಗಿಯೇ ಇದರ ಅನಾನುಕೂಲತೆಗಳನ್ನು ಮನನ ಮಾಡಿಕೊಂಡಿರುವ ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ಧರಣಿಗೆ ಬೆಂಬಲಿಸಿದೆ ಇದರ ಗಂಭೀರತೆ ರಾಜ್ಯ ಸರ್ಕಾರ ಗೊತ್ತು ಮಾಡಿಕೊಳ್ಳದೆ ಹೋದರೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ಈ ಪತ್ರ ನಡೆಯ ವಿರುದ್ದ ಭಾರಿ ಪ್ರತಿಭಟನೆಗೆ ಕರವೇ ಸ್ವಾಭಿಮಾನಿ ಬಣ ಮುಂದಾಗುತ್ತದೆ ಎಂದು ಈ ಮೂಲಕ ಎಚ್ಚರಿಸಿದೆ,

ಪ್ರತಿಭಟನಾ ಮನವಿಯಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಜಿ.ಆರ್ ರಾಘವೇಂದ್ರ ಸ್ವಾಮಿ, ವಕೀಲರಾದ ಕೆ.ಪಿ ಶ್ರೀಪಾಲ್, ಗೀತಾ ಮಾನೆ, ಸೇರಿದಂತೆ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾದ ಕರವೇ ಕಿರಣ್, ಮಹಿಳಾ ಅಧ್ಯಕ್ಷರಾದ ಕವಿತಾ, ಹಾಗೂ ಅರವಿಂದ್, ‌ಆರತಿ, ವಿಜಯ್ ಕುಮಾರ್ ಸೇರಿದಂತೆ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

Gara Srinivas

Gara Srinivas

Leave a comment

error: Content is protected !!