Sunday, August 2, 2026
Homeಸೂರ್ಯಗಗನI ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I

I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I

I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I

ತೀರ್ಥಹಳ್ಳಿ : ಗುಡ್ಡ ಕುಸಿದು ಮೂವರು ಸಾವನ್ನಪ್ಪಿರುವ ದುರ್ಘಟನೆ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡೆದಿದೆ..
ತಡರಾತ್ರಿ 2:30 ವೇಳೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದೆ.. ಗುಡ್ಡದ ಕೆಳಭಾಗದಲ್ಲಿ ಷ
ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಸಹ ಸಾವನ್ನಪ್ಪಿದ್ದಾರೆ..

ಮೃತಪಟ್ಟವರನ್ನ ಕೊಕ್ಕರೆಗಾರು ಗ್ರಾಮ ಗಂಗಾವತಿ ತಾಲೂಕು ಕೊಪ್ಪಳ ಜಿಲ್ಲೆ ಮಲ್ಲಿಕಾರ್ಜುನ (35 ವರ್ಷ ) ನಾಗವೇಣಿ (28 ವರ್ಷ ), ಸಂತೋಷ 3 ( ವರ್ಷ ) ಎಂದು ಗುರುತಿಸಲಾಗಿದೆ..
ಪಕ್ಕದ ಶೆಡ್ ನಲ್ಲಿದ್ದ ಹನುಮಂತ (31 ವರ್ಷ ) ಗಂಭೀರ ಗಾಯವಾಗಿದ್ದು ಅವರನ್ನ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ..

ರಾತ್ರಿ ಸುಮಾರು 2.30ರ ಹೊತ್ತಿಗೆ ಏಕಾಏಕಿ ಮಣ್ಣು ಜರಿದು, ತಡೆಗೋಡೆ ಮನೆಗಳ ಮೇಲೆ ಕುಸಿದಿದೆ. ಇದರಡಿ ಸಿಲುಕಿ ಮನೆಯಲ್ಲಿದ್ದವರು ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರ ಸಹಾಯದಿಂದ ಕಾರ್ಯಾಚರಣೆ ನಡೆಸಿ ಉಳಿದವರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು.

ಗಾಂಧಿನಗರ ವಾರ್ಡ್‌ ವ್ಯಾಪ್ತಿಗೆ ಬರುವ ಇಂದಿರಾನಗರವು ಗುಡ್ಡಗಾಡು ಪ್ರದೇಶವಾಗಿದ್ದು, ಇಲ್ಲಿ ಕೂಲಿ ಕಾರ್ಮಿಕರು ಹೆಚ್ಚಾಗಿ ವಾಸವಿದ್ದಾರೆ. ವಿವಿಧ ಜಿಲ್ಲೆಗಳಿಂದ ವಲಸೆ ಬಂದಿದ್ದ ಸುಮಾರು 40ಕ್ಕೂ ಹೆಚ್ಚು ಕುಟುಂಬಗಳು ಈ ಬಡಾವಣೆಯಲ್ಲಿ ವಾಸವಾಗಿವೆ. ಗೋಡೆ ಕುಸಿದ ಸ್ಥಳದ ಸುತ್ತಮುತ್ತ ಹೊಸಪೇಟೆಯ 15 ಹಾಗೂ ದಾವಣಗೆರೆಯ 5 ಮಂದಿ ವಾಸವಿದ್ದರು. ಇವರೆಲ್ಲರೂ ಬಂಡೆ ಲೋಡರ್ಸ್‌ ಕೆಲಸಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಈ ಭಾಗದಲ್ಲಿ ಗುಡ್ಡ ಕುಸಿತ ತಡೆಯುವ ಮುನ್ನೆಚ್ಚರಿಕೆಯಾಗಿ ಇಲ್ಲಿ ಸುಮಾರು 60 ಅಡಿ ಉದ್ದದ ತಡೆಗೋಡೆ ನಿರ್ಮಿಸಲಾಗಿತ್ತು. ಆದರೆ, ನಿರಂತರ ಮಳೆಯಿಂದ ತಡೆಗೋಡೆ ಧರೆಗೆಗುರುಳಿ ಈ ದುರಂತ ಸಂಭವಿಸಿದೆ. ಘಟನೆ ಸಂಭವಿಸಿದ ತಕ್ಷಣವೇ ಎಚ್ಚೆತ್ತ ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯತ್ ಒಟ್ಟು 17 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿದೆ..

ಇನ್ನು ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ಮೂವರನ್ನು ಹೊರ ತೆಗೆಯಲು ಬೆಳಗ್ಗೆ 5.30 ಕ್ಕೆ ಆರಂಭವಾದ ಕಾರ್ಯಾಚರಣೆ ಮಧ್ಯಾಹ್ನ ಒಂದು ಗಂಟೆಯವರೆಗೆ ನಡೆದಿದ್ದು, ಕಡೆಗೂ ಮೂವರ ಶವ ಪತ್ತೆಯಾಗಿದೆ.. ಮೂವರ ಶವವನ್ನು ತೀರ್ಥಹಳ್ಳಿ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ.. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I